doorada payana...

doorada payana...
ಉತ್ತುಂಗ ಶೃಂಗಗಳಿರುವುದು ಪ್ರವಾಸಕ್ಕಲ್ಲದೆ ನಿವಾಸಕ್ಕಲ್ಲ... -ಕುವೆಂಪು

Tuesday, January 11, 2011

ಅಪರಿಚಿತ ಸ್ನೇಹಿತರಿಗೆ...




ಸ್ನೇಹದ ಕಡಲಲ್ಲೀ... ನೆನಪಿನ ದೋಣಿಯಲೀ...

ಪಯಣಿಗ ನಾನಮ್ಮಾ...

ಪ್ರೀತಿಯ ತೀರವ ಸೇರುವುದೊಂದೇ ಬಾಳಿನ ಗುರಿಯಮ್ಮಾ...

ಈ ಸ್ನೇಹ, ಗೆಳೆತನ ಇದರ ಬಗ್ಗೆ ಎಲ್ರಿಗೂ ತಿಳಿದಿರುತ್ತೆ ಬಿಡಿ. ಹಾಗೇನೇ ಪ್ರೀತಿ, ಒಲುಮೆ ಇವನ್ನು ನಾವು ನಮ್ಮ ಲೈಫಲ್ಲಿ ಅನುಭವಿಸದೇ ಇದ್ರೂ, ಇದರ ಬಗ್ಗೆ ತಿಳಿದಿರ್ತೀವಿ, ಎಲ್ಲೋ ಒಂದು ಕಡೆ ಓದಿರ್ತೀವಿ. ಇದರ ಬಗ್ಗೆ ಎಷ್ಟು ತಿಳಿದ್ರೂ ಕೆಲವೊಮ್ಮೆ ನಾವು ನಮ್ಮ ಲೈಫಲ್ಲಿ ಸ್ನೇಹಕ್ಕೂ-ಪ್ರೀತಿಗೂ ನಡುವಿನ ವ್ಯತ್ಯಾಸಾನಾ ಗುತರ್ಿಸೋದ್ರಲ್ಲಿ ಎಡವಿರ್ತೀವಿ. ಸ್ನೇಹಕ್ಕೂ-ಪ್ರೀತಿಗೂ ಅಜಗಜಾಂತರ ವ್ಯತ್ಯಾಸವಿದ್ರೂ ಹೀಗೇಕಾಗುತ್ತೆ ಅಂತ ತಿಳಿಯಲ್ಲ. ಇದು ಸ್ನೇಹಾನಾ..? ಇದು ಪ್ರೀತೀನಾ..? ಅಂತಾ ತಿಳೀದೇ ಮುಂದುವರಿದ್ರೆ ಮುಂದೆ ಕಷ್ಟಗಳ ಸರಮಾಲೆಯೇ ಎದುರಾಗೋ ಸಾಧ್ಯತೆಯಂತೂ ಇದ್ದೇ ಇರುತ್ತೆ.

ಘಟನೆ-1 ಮೊಬೈಲಿಗೆ ಯಾರ್ದೋ ಮಿಸ್ಕಾಲ್ ಬರುತ್ತೆ. ಹೊಸ ನಂಬರ್. ರಾತ್ರಿ ಹಗಲು ಆ ನಂಬರ್ನಂದ ಬಿಡುವಿಲ್ಲದೆ ಮಿಸ್ಡ್ ಕಾಲ್ಗಳು. ಯಾರಪ್ಪಾ... ಇವ್ರು ಅಂದ್ಕೊಂಡು ಅತ್ತ ಕಡೆ ಕಾಲ್ ಮಾಡಿದ್ರೆ ಅದು ಯಾವುದೋ ಹೆಣ್ಣಿನ ದನಿ. ಮಿಸ್ಡ್ಕಾಲ್ನಲ್ಲಿ ಶುರುವಾದ ಈ ಮೊಬೈಲ್ ಸ್ನೇಹ ಕೆಲವೇ ದಿನ ಕಳೆಯೋದ್ರೊಳಗೆ ಆಳವಾಗಿ ಬೇರೂರಿರುತ್ತೆ. ಅತ್ತ ಕಡೆಯ ಹೆಣ್ಣು-ಇತ್ತ ಕಡೆಯ ಗಂಡು ಇಬ್ಬರೂ ಸ್ನೇಹದ ಕಡಲಲ್ಲಿ ಮಿಂದು ರಾತ್ರಿ-ಹಗಲೆನ್ನದೆ ಏನೇನೋ ಮಾತಾಡ್ತಾರೆ. ಒಬ್ಬರಿಗೊಬ್ಬರ ಪರಿಚಯವೇ ಇಲ್ಲದಿದ್ರೂ ಸ್ನೇಹ ಗಾಢವಾಗುತ್ತಾ ಹೋಗುತ್ತೆ. ಕೊನೆಗೊಂದು ದಿನ ಆ ಘಳಿಗೆ ಬಂದೇ ಬರುತ್ತೆ. ಅವತ್ತು ಯಾರೋ ಒಬ್ರು ಸ್ನೇಹಾನಾ ಪ್ರೀತಿಯಾಗಿ ಪಡೆಯಲು ಹಾತೊರೆಯ್ತಾರೆ. ಆದ್ರೆ ಇಂತಹ ಸ್ನೇಹಿತರಲ್ಲಿ ಕೇವಲ ಮೋಜಿಗಾಗಿ ಅರೆ ಕ್ಷಣ ಮಾತ್ರ ಪ್ರೀತಿಸ್ತೀನಿ ಅನ್ನಬಹುದು. ಆದ್ರೆ ಅದೇ ಶಾಶ್ವತ ವಾಗಿರೋದಿಕ್ಕೆ ಸಾಧ್ಯಾನಾ? ಅಂತೂ ಇಂತೂ... ಪ್ರೀತಿ ಬಂತು, ಅಂತ ಹಾಡಿ ಕುಣಿದ್ರೆ ಆ ಪ್ರೀತಿ ಕೆಲವೇ ದಿನಗಳಲ್ಲಿ ಮರೆಯಾಗಿರುತ್ತೆ.

ಘಟನೆ-2: ಇದ್ದಕಿಂದ್ದಂತೆ ಒಬ್ಬಳು ಹುಡುಗಿಯ ಮೊಬೈಲಿಗೆ ಯಾವುದೋ ಒಂದು ಹೊಸ ನಂಬರಿನಿಂದ ಮೆಸೇಜ್ ಬರುತ್ತೆ. ಇದು ಮುಂದುವರಿದಾಗ ಹುಡುಗಿ ಮಾತಾಡ್ತಾಳೆ. ಆತನೂ ಮಾತಾಡ್ತಾನೆ. ಮುಂದೆ ಇವರಿಬ್ಬರ ಮೊಬೈಲಿಂದ ಬೇಕಾದಷ್ಟು ಮೆಸೇಜ್ಗಳು ರವಾನೆಯಾಗುತ್ತೆ. ಅಷ್ಟರಲ್ಲಿ ಅರವರಿಬ್ರೂ ಲವ್ವಲ್ಲಿ ಬಿದ್ದಿರ್ತಾರೆ. ಇಲ್ಲೂ ಅವರಿಬ್ಬರೂ ಒಬ್ಬರನ್ನೊಬ್ಬರು ಸರಿಯಾಗಿ ನೋಡಿರಲ್ಲ, ಎದುರಾಗಿ ಮಾತಾಡಿರಲ್ಲ. ಆದ್ರೂ ಅದು ಪ್ರೀತಿ ಅಂತ ತಿಳ್ಕೊಂಡು ಮುಂದುವರಿಯ್ತಾರೆ.

ಹೀಗೆ ಈ ಮೇಲಿನ ಎರಡು ಸ್ಯಾಂಪಲ್ಲಲ್ಲಿ ಪರಸ್ಪರ ಗುರುತು ಪರಿಚಯವಿಲ್ಲದ ಎರಡು ಜೀವಗಳು ಸ್ನೇಹಕ್ಕೆ ಸಿಕ್ಕಿ ಹಾಕ್ಕೊಳ್ಳುತ್ತೆ. ಇಲ್ಲಿ ಸಿಕ್ಕಿ ಹಾಕ್ಕಿಕೊಳ್ಳುವಾಗ `ಐ ಲವ್ ಯು' ಅನ್ನೋವಾಗ ಮುಂದೇನಾಗುತ್ತೆ ಅನ್ನೋದೇ ತಿಳಿದಿರಲ್ಲ. ಹಾಗಾದ್ರೆ ನೋಡದೇ ಇದ್ರೂ ಪ್ರೀತಿ ಹುಟ್ಟುತ್ತಾ..? ತುಂಬಾ ವಿಚಿತ್ರ ಅನ್ನಿಸುತ್ತೆ ಅಲ್ವಾ? ಇದು ವಿಚಿತ್ರವಾದರೂ ಸತ್ಯ. ಬಹಳ ವರ್ಷಗಳ ಹಿಂದೆ ಹಿಂದಿಯಲ್ಲಿ ಬಿಡುಗಡೆಗೊಂಡಿದ್ದ ಯಶಸ್ವಿ ಚಿತ್ರ `ಸಿಫರ್್ ತುಮ್' ಕನ್ನಡದಲ್ಲಿ `ಯಾರೇ ನೀನು ಚೆಲುವೆ' ಆಯಿತು. ಅದರ ಕಥಾವಸ್ತುವೂ ಇದೇ ಆಗಿತ್ತು. ಅಚಾನಕ್ಕಾಗಿ ಭೇಟಿಯಾಗುವ ಗಂಡು-ಹೆಣ್ಣು ಫೋನ್ ಮುಖಾಂತರ ಸ್ನೇಹಿತರಾಗಿ, ಪ್ರೀತಿಯ ಬಲೆಯಲ್ಲಿ ಬಿದ್ದು ಕೊನೆಗೆ ಆ ಪ್ರೀತಿಯನ್ನು ಪಡೆಯಲು ಪಡುವ ಕಷ್ಟವನ್ನು ನಿದರ್ೆಶಕರು ಸೊಗಸಾಗಿ ನರೂಪಿಸಿದ್ದಾರೆ. ಹೀಗಾಗಿ ಆ ಚಿತ್ರ ಶತದಿನೋತ್ಸವ ಕಂಡಿತು. ಈ ವಿಷಯ ಯಾಕೆ ಹೇಳಿದ್ದೆಂದರೆ, ನೋಡದೆ ಪ್ರೀತಿಸುವ ಕಥಾ ಹಂದರ ನಮಲ್ಲಿ ಅದೆಷ್ಟೋ ಬಂದು ಹೋಗಿದೆ. ಇದು ಪ್ರೀತಿಯಲ್ಲ ಅಂತ ಬುದ್ಧಿಯಿರೋರು ಹೇಳಬಹುದು. ಹದಿಹರೆಯದ ಮಾನಸಿಕ ಸಮಸ್ಯೆ ಅಂತನ್ನಲೂಬಹುದು, ಮನಸ್ಸಿನ ತುಮುಲ ಅಂತಂದ್ರೂ ಓ.ಕೆ. ಆದ್ರೂ ಇಲ್ಲೂ ಒಂದು ಅಪ್ಪಟ ಸ್ನೇಹವಿರುತ್ತೆ. ತಾಜಾತನದಿಂದ ನಳನಳಿಸೋ ಹೂವಿನ ತರಾ ಸ್ನೇಹದ ಸುಗಂಧ ಎಲ್ಲೆಡೆಗೂ ವ್ಯಾಪಿಸಿರುತ್ತೆ.

ನೋಡದೆ ಸ್ನೇಹ ಹುಟ್ಟುತ್ತೆ. ಅದನ್ನು ಹಾಗೇ ಬಿಟ್ಟು ಅದಕ್ಕೆ ನೀರೆರೆದರೆ ಅದು ಬೆಳೆದು ಪ್ರೀತಿಯಾಗುತ್ತೆ. ಆದ್ರೆ ಆ ಸ್ನೇಹವನ್ನು ಸರಿಯಾಗಿ ಗುತರ್ಿಸಿ, ಅಥರ್ೈಸಬೇಕಾದ್ದು ನಮ್ಮ ಕರ್ತವ್ಯ. ಕೆಲವ್ರು ಯಾವುದೋ ಒತ್ತಡದಲ್ಲಿ ಬಿದ್ದು ಪ್ರೀತಿಸ್ತಾರೆ. ಸ್ನೇಹಾನ ಪ್ರೀತಿಯೆಂದು ತಿಳಿದು ಮೋಸದ ಬಲೆಗೆ ಬೀಳ್ತಾರೆ. ಪ್ರೀತಿಸ್ತೀನಿ ಅಂತಂದು ಎಲ್ಲವನ್ನೂ ದೋಚಿ ಪರಾರಿಯಾಗೋರೂ ನಮ್ಮಲ್ಲಿ ಬೇಕಾದಷ್ಟು ಜನ ಇದ್ದಾರೆ. ಹೀಗಾಗಿ ಪ್ರೀತಿ ಹೆಸರಲ್ಲಿ ಇದಕ್ಕೆಲ್ಲಾ ಆಸ್ಪದ ಕೊಡಬಾರದು ತಾನೇ?

ಸ್ನೇಹಕ್ಕೆ ಯಾವುದೇ ಬೇಧವಿಲ್ಲ ನಿಜ. ಜಾತಿ-ಮತ ಬೇಧ ತೋರದೆ ಎಲ್ಲೆಲ್ಲೂ ತುಂಬಿರೋದು ಅಂತಂದ್ರೆ ಈ ಸ್ನೇಹ ಮಾತ್ರ. ನಿಜವಾದ ಸ್ನೇಹಕ್ಕೆ ಮುಖದರ್ಶನದ ಅಗತ್ಯವಿರಲ್ಲ. ಯಾರಿಗ್ಗೊತ್ತು, ನಾಳೆ ನಮ್ಮ ಮುಖದರ್ಶನವಾದ ಕೂಡಲೇ ಅವ್ರಿಗೆ ನಾವು ಬೇಡ ಅನ್ನಿಸೋಕ್ಕೂ ಸಾಧ್ಯವಿದೆ. ಆದ್ದರಿಂದ ಸ್ನೇಹ ಸ್ನೇಹವಾಗೇ ಇರಲಿ. ನಿರ್ಮಲ, ನಿಷ್ಕಲ್ಮಶ ಸ್ನೇಹಾನ ಪ್ರೀತಿಯೆಂದು ತಪ್ಪಾಗಿ ಭಾವಿಸಿದ್ರೆ ನಾಳೆ ನಾವು ಆ ಸ್ನೇಹಾನ ಕಳ್ಕೋಬಹುದು. ನೋಡದೆ ಹುಟ್ಟೋ ಸ್ನೇಹ ಚಿರಕಾಲದ ತನಕ ಶಾಶ್ವತವಾಗಿರಲಿ. ಅದಕ್ಕೆ ಪ್ರೀತಿಯ ಲೇಪನ ಬೇಡ ಅನ್ನುವುದು ನನ್ನ ಅಭಿಮತ. ಒಂದು ವೇಳೆ ಅದೇ ಪ್ರೀತಿಯಾಗಿ ನಮ್ಮ ಮುನ್ನಡೆಸುತ್ತದೆಯಾದ್ರೆ ಅದು ನಿಜಕ್ಕೂ ಸಂತಸದ ಮಾತೇ ಸರಿ. ಗುರುತು ಪರಿಚಯವಿಲ್ಲದೆ ಮಿಸ್ಡ್ ಕಾಲ್, ಮೆಸೇಜ್ ಮೂಲಕ ಪರಿಚಯವಾದ ಅದೆಷ್ಟೋ ಸ್ನೇಹಿತರಿಗೆ ಪ್ರೀತಿ ತುಂಬಿದ ನಮಸ್ಕಾರಗಳು.

ರಾ+ಜ+ಕೀ+ಯ



ರಾ-ರಾವಣ, ಜ-ಜರಾಸಂಧ, ಕೀ-ಕೀಚಕ, ಯ-ಯಮ. ಇವರೆಲ್ಲಾ ಒಟ್ಟು ಸೇರಿದ್ರೆ ನಮ್ಮ ಹಾಳುಗೆಟ್ಟ ರಾಜಕೀಯ ಅನ್ನೋದು ನನಗಿಂತ ನಿಮಗೇ ಚೆನ್ನಾಗಿ ತಿಳಿದಿರಬಹುದು. ನಮ್ಮ ರಾಜಕೀಯ ವ್ಯವಸ್ಥೆಯ ಬಗ್ಗೆ ಬರೆಯೋ ಹಕೀಕತ್ತು ನನ್ಗೂ ಇರಲಿಲ್ಲ. ಆದ್ರೂ ಈಗಷ್ಟೇ ತಾ.ಪಂ, ಜಿ.ಪಂ. ಇಲೆಕ್ಷನ್ನು ಮುಗಿದಿದೆ, ಈಗಿನ ರಾಜಕೀಯ ಸ್ಥಿತಿಯಲ್ಲಿ ಯಾವಾಗ ಈ ಇಲೆಕ್ಷನ್ನು ಬರುತ್ತೆ ಅಂತ ಹೇಳೋಕೂ ಆಗಲ್ಲ. ಹೀಗಿರೋವಾಗ ಕೊಂಚನಾದ್ರೂ ನಿಮ್ಗೆ ಹೇಳದೇ ಇದ್ರೆ ಹೇಗೆ ಹೇಳಿ?

ಹಾಗಾದ್ರೆ ರಾಜಕೀಯ ವ್ಯವಸ್ಥೆಯನ್ನೋದು ನಮ್ಮ ಹೆದ್ದಾರಿಯಷ್ಟೂ ಹದಗೆಟ್ಟಿದೆಯಾ, ಅಂತ ನೀವು ನೀವೇ ಕೇಳ್ಕೊಳ್ಳಿ. ಆಗ ನಮಗೇ ತಿಳಿಯುತ್ತೆ, ನಾನ್ಯಾಕೆ ಈ ರೀತಿ ಬರೆದೆನೆಂದು. ಎಳೆ ಪ್ರಾಯದ ಮಗುವಿನಿಂದ ಹಿಡಿದು ಹಣ್ಣುಹಣ್ಣು ಮುದುಕರ ತನಕ ರಾಜಕೀಯ ಅನ್ನೋ ಹೆಸರೆತ್ತಿದ್ರೆ ಸಾಕು, ಸಿಡಿದು ಬೀಳೋ ಜನಾನೇ ನಮ್ಮಲ್ಲಿರೋವಾಗ ವ್ಯರ್ಥ ಆಲಾಪ ಯಾಕೆ ಬೇಕು? ಎಲೆಕ್ಷನ್ನು ಅಂದಮೇಲೆ ಅಲ್ಲಿ ಗಲಾಟೆ, ಪರ-ವಿರೋಧಿಗಳ ನಡುವಿನ ಕಚ್ಚಾಟ, ಕಂಟ್ರಿ ಸಾರಾಯಿಯ ಹಂಚುವಿಕೆ ಇವೆಲ್ಲಾ ಇದ್ದದ್ದೇ. ಎಲೆಕ್ಷನ್ನು ಅಂದ್ರೆ ನನ್ನ ಬಾಲ್ಯದ ನೆನಪುಗಳು ಈಗಲೂ ಮಸುಕು ಮಸುಕಾಗಿ ಗೋಚರಿಸುತ್ತೆ. ನಮ್ಮ ಊರಲ್ಲಿ ಚುನಾವಣೆ ಬಂತಂದ್ರೆ ಗೌಜಿಯೋ ಗೌಜಿ. ಊರಿಗೆ ಊರೇ ಉಲ್ಲಾಸದಿಂದ ಬೆಳಿಗ್ಗೆ ಬೇಗನೇ ಎದ್ದು ಕುಳಿತಿರುತ್ತೆ. ಹೆಚ್ಚಾಗಿ ಈ ಚುನಾವಣೆ ಅನ್ನೋದು ಶಾಲಾ ಮಕ್ಕಳ ರಜಾದಿನಗಳಲ್ಲೇ ಬರೋದ್ರಿಂದ ನಮಗೆಲ್ಲಾ ಏನೋ ಖುಷಿ. ಒಂಭತ್ತು ದಿನಗಳ ನವರಾತ್ರಿ ಉತ್ಸವ ಬಂದಾಗ ನಾನಾ ರೀತಿಯ ವೇಷ ನೋಡೋಕ್ಕೆ ಯಾವ ರೀತಿ ಕಾದಿರ್ತೀವೋ ಅದೇ ರೀತಿ ಚುನಾವಣೆಯೂ ಕೂಡಾ. ಡಿಫರೆನ್ಸ್ ಏನಂದ್ರೆ ನವರಾತ್ರಿಯ ವೇಷಗಳು ತಮ್ಮ ವೇಷವನ್ನು ಪ್ರದಶರ್ಿಸುತ್ತೆ, ಎಲೆಕ್ಷನ್ನು ಸಮಯ ಬರೋ ವೇಷಗಳು ತಮ್ಮ ಒಳಗೊಳಗೇ ನಾನಾ ರೀತಿಯ ವೇಷಗಳನ್ನು ಒಂದಾದ ಮೇಲೊಂದರಂತೆ ಧರಿಸಿರುತ್ತೆ. ಆದ್ರೆ ನಮ್ಮಗಳ ಕಣ್ಣಿಗೆ ಕಾಣೋದಿಲ್ಲ ಅಷ್ಟೆ.

ಚಿಕ್ಕಂದಿನಲ್ಲಿ ಚುನಾವಣೆ ಬಂದಾಗ ನಾನು ಮತ್ತು ನನ್ನ ಗ್ಯಾಂಗ್ಗೆ ಆನಂದವೋ ಆನಂದ. ನಮ್ಮೂರಿನ ಕುಲಗೆಟ್ಟ ರಸ್ತೆಯಲ್ಲಿ ಆಗೊಮ್ಮೆ, ಈಗೊಮ್ಮೆ ಓಡಾಡುವ ಬಿಳಿಯ ಬಣ್ಣದ ಅಂಬಾಸಿಡರ್ ಕಾರು, ಅದರೊಳಗಿಂದ ಕರಿಯ ಕನ್ನಡಕ, ಬಿಳಿ ಪಂಚೆ, ಜುಬ್ಬಾ ತೊಟ್ಟವರು ಕೆಳಗಿಳಿಯುತ್ತಲೇ ನಮ್ಮಗಳ ಉತ್ಸಾಹ ನೂರ್ಮಡಿಯಾಗುತ್ತಿತ್ತು. ಅವರ ಹಿಂದೆ ಮುಂದೆ ಅದೆಷ್ಟೋ ಬಿಳಿಯ ಅಂಗಿಗಳು ಇರುವೆಗಳಂತೆ ಮುತ್ತಿರುವುದನ್ನು ಕಂಡಾಗ ನಮ್ಗೂ ಗೌರವ ಭಾವ. ಅಷ್ಟರಲ್ಲಿ ಒಬ್ಬವೇದಿಕೆಯ ಮೇಲೇರಿ ಮೈಕಾದಲ್ಲಿ ಊರಿನ ಜನರನ್ನು `ಅಕ್ಕನಕುಲೇ... ಅಣ್ಣನಕುಲೇ...' ಎಂದು ಜೋರಾಗಿ ಅರಚಲು ತೊಡಗಿದರೆ ಎದೆ ನಡುಕ ಹುಟ್ಟುತ್ತಿತ್ತು. ಕೊನೆಗೆ ನಮ್ಮ ಊರಿನ ಓಟನ್ನು ಪಡೆಯಲು ಆ ಬಿಳಿಯ ಬಟ್ಟೆಯವರು ವೇದಿಕೆಯ ಮೇಲೆ ಹತ್ತು ಹಲವು ರೀತಿಯ ಆಶ್ವಾಸನೆಗಳನ್ನು ನೀಡುತ್ತಿದ್ದರು. ರಸ್ತೆ, ದಾರಿದೀಪ, ನಳ್ಳಿ ನೀರು, ಬೋರ್ವೆಲ್ ಹೀಗೆ ನಮ್ಮೆಲ್ಲರನ್ನೂ ನಂಬಿಸಿ ಬಿಡುತ್ತಿದ್ದರು. ನಮ್ಮ ಊರಿನವರಿಗೆ ಅವರು ಮನುಷ್ಯರೇ ಅಲ್ಲ, ದೇವರ ತದ್ರೂಪ ಎನ್ನುವ ಭಾವನೆ. ಹೀಗೆ ನಂಬಿಕೆ, ಭರವಸೆಯ ಜತೆಗೆ ಎಲೆಕ್ಷನ್ನು ಮುಗಿದು ಹೋಗುತ್ತಿತ್ತು. ತಿಂಗಳ ಕಾಲ ನಮ್ಮ ಊರಿನ ರಸ್ತೆಯ ತುಂಬಾ ರಾಡಿಯೆಬ್ಬಿಸಿ , ರಸ್ತೆಯ ಗುಂಡಿಯನ್ನು ಇನ್ನಷ್ಟು ಆಳವನ್ನಾಗಿಸಿದ್ದ ಬಿಳಿಯ ಮೋಟಾರು ವಾಹನಗಳು ಕಾಣದಾದಾಗ, ಬಿಳಿ ಅಂಗಿಗಳೆಲ್ಲಾ ಕಾಣದೆ ಮಾಯವಾದಾಗ ಸ್ವಲ್ಪ ದಿನ ಬೋರ್ ಹೊಡೆಸುತ್ತಿತ್ತು.(ನವರಾತ್ರಿ ಮುಗಿದ ನಂತರ ಆಗುತ್ತಲ್ಲಾ ಹಾಗೆ). ಆದ್ರೆ ನಂತರ ನಮ್ಮ ಊರಿನ ಪೆಕರಾಗಳ ಓಟಿನಿಂದ ಗೆದ್ದವರು ಇತ್ತ ತಲೆ ಹಾಕಿ ಮಲಗುವುದನ್ನೂ ಬಿಟ್ಟಾಗ ನಮ್ಮ ಊರಿನ ಹಿರಿ ಜೀವಗಳು ಹಿಡಿಶಾಪ ಹಾಕುವುದನ್ನು ನೋಡಿದ್ದೆ. ಆಗೆಲ್ಲಾ ಇದೊಂದು ನಾಟಕದಂತೆ ಕಾಣುತ್ತಿತ್ತು.

ಬೆಳೆಯುತ್ತಾ ರಾಜಕೀಯದ ಬಗೆಗಿನ ನನ್ನ ಆಸಕ್ತಿಗಳಿಗೆಲ್ಲಾ ಸರಿಯಾದ ಉತ್ತರ ಸಿಕ್ಕಿದಾಗ ಆಶ್ಚರ್ಯವೂ ಆಯಿತೆನ್ನಿ. ಆಮೇಲೆ ರಾಜಕೀಯ ಅಂದ್ರೆ ನನಗೆ ಈ ರೀತಿಯ ನಿಜಾರ್ಥ ಹೊಳೆದದ್ದು. ಈಗಂತೂ ನಮ್ಮ ರಾಜಕೀಯ ವ್ಯವಸ್ಥೆ ಎಕ್ಕುಟ್ಟಿ ಹೋಗಿರುವುದನ್ನು ಕಣ್ಣೆದುರೇ ನೋಡುತ್ತೇವೆ. ಪಟಿಂಗನ ಕೊನೆಯ ಆಸರೆ ಎನ್ನುವಂತೆ ರಾಜಕೀಯ ಕೀಳಾಗಿ ಹೋಗುತ್ತಿದೆ. ಎಲೆಕ್ಷನ್ನು ಹೇಗಾದ್ರೂ ಆಗಲಿ, ಯಾರೇ ಬೇಕಾದ್ರೂ ಕುಣೀಲಿ, ಓಟು ಮಾತ್ರ ನೀಡೋದು ನಮ್ಮ ಹಕ್ಕು ಅಲ್ವೇನ್ರೀ..?

ಲಾಸ್ಟ್ ಲೈನ್: ನಮ್ಮ ಊರಿನ ಅದೇ ಹಿಂದಿನ ಮಣ್ಣಿನ ರಸ್ತೆ, ರಾತ್ರಿಯ ಕತ್ತಲು, ನಮ್ಮೂರಿನ ಹೆಣ್ಮಕ್ಕಳು ಸೊಂಟ ಬಳುಕಿಸ್ಕೊಂಡು, ಕಾಲು ಉಳುಕಿಸ್ಕೊಂಡು ದೂರದ ಕೆರೆ, ನದಿಯಿಂದ ನೀರು ತರುವುದನ್ನು ನೋಡಿ ಅಯ್ಯೋ ಪಾಪ ಅನಿಸುತ್ತೆ. ಆದ್ರೇನು ಮಾಡೋಣ, ಈ ಸಲನಾದ್ರೂ ಸರಿಯಾದ್ರೆ.... ಅನ್ನೋ ದೂರದ ಆಶೆಯಿಂದ ಜನ ಮತ್ತದೇ ತಪ್ಪು ಮಾಡ್ತಿದ್ದಾರೆ.